Here are some science-based pieces that I have written/transcreated in Kannada over the last few years. 

ಕೊರೋನ ಮತ್ತು ಬಾವಲಿಯ ನಂಟು: ಬಾವಲಿಗಳನ್ನು ಹೊರಗಟ್ಟಬೇಕೇ?

ಬಾವಲಿಗಳು ತಮ್ಮ ಪಾಡಿಗೆ ತಾವು ರಾತ್ರಿಯಲ್ಲಿ ಹಾರಾಡುವ ಸಸ್ತನಿಗಳು. ಇವು ಪ್ರಪಂಚದಾದ್ಯಂತ ಹರಡಿದ್ದು, ಇವುಗಳಲ್ಲಿ ಸುಮಾರು ೧೨೦೦ ಪ್ರಭೇದಗಳಿವೆ. ಈಗಿನ ಲಾಕ್ ಡೌನ್ ಗೆ ಕಾರಣವಾಗಿರುವ ಕೋವಿಡ್-೧೯ ಸಾಂಕ್ರಾಮಿಕವನ್ನು ಬಾವಲಿಗಳು ಹರಡುತ್ತಿವೆ ಎಂದು ಜನರು ತಿಳಿದಿದ್ದಾರೆ. ಇದಕ್ಕೆ ಪೂರಕವಾಗಿ, ಕೆಲವೇ ದಿನಗಳ ಹಿಂದೆ, ICMR (ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್)ನ ಅಧ್ಯಯನವೊಂದು ದಕ್ಷಿಣ ಭಾರತದಲ್ಲಿ ಕಂಡುಬರುವ ಬಾವಲಿಗಳಲ್ಲಿ “ಬ್ಯಾಟ್-ಕೊರೊನ ವೈರಸ್” ಇದೆ ಎಂಬುದು ಬೆಳಕಿಗೆ ಬಂದಿದೆ. ಇದನ್ನೆಲ್ಲಾ ಓದಿದ ಜನ, ಭಯಭೀತರಾಗಿ ಕೆಲವೆಡೆ ಬಾವಲಿಗಳನ್ನು ಕೊಲ್ಲುವ ನಿರ್ಧಾರ ಮಾಡಿದ್ದಾರೆ. ಕೆಲವರಂತೂ ಮನೆ ಅಂಗಳದಲ್ಲಿ

ಪ್ಲಾಸ್ಟಿಕ್ ಎಂಬ ಪೆಡಂಭೂತದಿಂದ ಮುಕ್ತಿ ಎಂದು?

ಈ ವರ್ಷದ ‘ವಿಶ್ವ ಪರಿಸರ ದಿನ’ದ ಅಂಗವಾಗಿ ‘‘ಪ್ಲಾಸ್ಟಿಕ್ಕಿನಿಂದ ಮಾಲಿನ್ಯ ತಡೆಗಟ್ಟೋಣ’’ ಎಂದು ವಿಶ್ವ ಸಂಸ್ಥೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಘೋಷಿಸಿದೆ. ಪ್ಲಾಸ್ಟಿಕ್ ಇಂದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದರೂ ಅದರ ಬಗ್ಗೆ ಸರಿಯಾದ ಅರಿವು ಅತ್ಯವಶ್ಯಕ.

ದಾಳಿಂಬೆ ಹಣ್ಣಿನ ಸವಿರುಚಿಯಂತೆ ಅದರ ಬೀಜವು ಉಪಯುಕ್ತ

ಭಾರತೀಯ ತಂತ್ರಜ್ಞಾನ ಸಂಸ್ಥೆ ಬಾಂಬೆಯ (ಐಐಟಿ ಬಾಂಬೆ) ಪ್ರಾಧ್ಯಾಪಕರಾದ ಪ್ರೊ. ಅಮಿತ್ ಅರೋರಾ ಮತ್ತು ಸಂಗಡಿಗರು ದಾಳಿಂಬೆ ಬೀಜದಿಂದ ಎಣ್ಣೆಯನ್ನು ತೆಗೆಯುವ ನವೀನ ವಿಧಾನವನ್ನು ಪ್ರಸ್ಥಾಪಿಸಿದ್ದಾರೆ. ಈ ವಿಧಾನವು ಅತ್ಯoತ ಅಗ್ಗವಾಗಿಯೂ, ತ್ಯಾಜ್ಯ ರಹಿತವಾಗಿಯೂ ಇದ್ದು ಅತೀ ಹೆಚ್ಚು ಗುಣಮಟ್ಟದ ಪ್ರೋಟೀನ್ (ಸಸಾರಜನಕ ಆಹಾರ ಪದಾರ್ಥ) ಮತ್ತು ನಾರಿನ ಅಂಶ ನೀಡಬಲ್ಲದು.